Coastal Bulletin

ಮಂಗಳೂರು: ಮೂಡುಬಿದಿರೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಸಭೆ ನಡೆಯಿತು. ಈ ವೇಳೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.

5ರಂದು ಶಿರ್ವ ಕಂಬಳದೊಂದಿಗೆ ಕಂಬಳ ಋತು ಪ್ರಾರಂಭಗೊಳ್ಳಲಿದ್ದು, ಎಪ್ರಿಲ್‌ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. ಈ ಬಾರಿ ಪಣಪಿಲದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ.

Leave a Comment