Coastal Bulletin

ಲಡಾಖ್: ದೊಡ್ಡ ಸೈನ್ಯ, ಶಸ್ತ್ರಾಸ್ತ್ರಗಳನ್ನು ನಿಯೋಜಿಸುವುದನ್ನು ಮುಂದುವರಿಸಿದೆ ಎಂದು ವರದಿಯಾಗಿದೆ. 20 ಭಾರತೀಯ ಸೈನಿಕರು ಹುತಾತ್ಮರಾದ ಗಲ್ವಾನ್ ಘರ್ಷಣೆಯ ಒಂದು ವರ್ಷದ ನಂತರ ಲಡಾಖ್‌ನ ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ.

ಚೀನಾದ ಪ್ರಚೋದನಕಾರಿ ನಡವಳಿಕೆ, ಸೈನ್ಯವನ್ನು ಒಟ್ಟುಗೂಡಿಸುವುದು ಮತ್ತು ಯಥಾಸ್ಥಿತಿ ಬದಲಿಸುವ ಏಕಪಕ್ಷೀಯ ಪ್ರಯತ್ನಗಳು ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಗಂಭೀರ ಶಾಂತಿ ಮತ್ತು ನೆಮ್ಮದಿಗೆ ಭಂಗ ತಂದಿದೆ ಎಂದು ಭಾರತ ಗುರುವಾರ ಹೇಳಿದೆ.

ಮಾಧ್ಯಮಗಳನ್ನು ಉದ್ದೇಶಿಸಿ

ಮಾತನಾಡಿದ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಬೀಜಿಂಗ್ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ನಿಯೋಜಿಸುತ್ತಿದೆ ಮತ್ತು ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು "ಸೂಕ್ತ ಕೌಂಟರ್ ನಿಯೋಜನೆಗಳನ್ನು ಮಾಡಬೇಕಾಗಿದೆ" ಎಂದು ಹೇಳಿದರು.

Leave a Comment