ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೋಲಿಸರು ಬಂಧಿಸಿದ್ದಾರೆ.
ರಾಜಸ್ಥಾನದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಟೈಲರ್ ನ್ನು ಶಿರಚ್ಛೇದನ ಮಾಡಿ, ಇಸ್ಲಾಂ ಧರ್ಮವನ್ನು ಅವಮಾನಿಸಿದ್ದಕ್ಕೆ ಈ ಕೃತ್ಯ ಮಾಡಿರುವುದಾಗಿ ವಿಡಿಯೋದಲ್ಲಿ ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಅಲ್ಲದೆ ಪ್ರಧಾನಿ
ಮೋದಿಯನ್ನು ಹತ್ಯೆ ಮಾಡುವುದನ್ನು ಕೂಡ ತಿಳಿಸಿದ್ದಾರೆ. ಇದೀಗ ಈ ಇಬ್ಬರು ದುಷ್ಕರ್ಮಿಗಳನ್ನು ರಾಜಸಮಂದ್ ನಿಂದ ಬಂಧಿಸಲಾಗಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

















