Coastal Bulletin

ಬೆಂಗಳೂರು(ಜೂ.26): ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡಿನ ಕೆಲವು ಗ್ರಾಮಗಳ ಕನ್ನಡದ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಮುಂದಾಗಿರುವ ಕೇರಳ ಸರ್ಕಾರಕ್ಕೆ ಪತ್ರ ಬರೆದು ಕೂಡಲೇ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮನವಿ ಸಲ್ಲಿಸಿದೆ.

ಶುಕ್ರವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರನ್ನು ಭೇಟಿ ಮಾಡಿದ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್‌ ಅವರು

ಕೂಡಲೇ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕನ್ನಡದ ಹೆಸರುಗಳನ್ನು ಬದಲಿಸದಂತೆ ಗಮನ ಸೆಳೆಯಬೇಕು ಎಂದು ಮನವಿ ಮಾಡಿದ್ದಾರೆ. 

Leave a Comment