ಬೆಂಗಳೂರು(ಜೂ.26): ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡಿನ ಕೆಲವು ಗ್ರಾಮಗಳ ಕನ್ನಡದ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಮುಂದಾಗಿರುವ ಕೇರಳ ಸರ್ಕಾರಕ್ಕೆ ಪತ್ರ ಬರೆದು ಕೂಡಲೇ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮನವಿ ಸಲ್ಲಿಸಿದೆ.















