ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

Coastal Bulletin
ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

ನವದೆಹಲಿ: ಇಂಡಿಯಾ ಒಕ್ಕೂಟದಿಂದ ಆಮ್‌ ಆದ್ಮಿ ಪಕ್ಷ (Aam Admi Party) ಹೊರ ಬಂದಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ (Sanjay Singh) ತಿಳಿಸಿದ್ದಾರೆ.

ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಒಕ್ಕೂಟದಿಂದ ಎಎಪಿ ಹೊರ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ 2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ

ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು.

ಇಂದು ಮುಂಗಾರು ಅಧಿವೇಶನ ಹಿನ್ನೆಲೆ ಸಂಜೆ ಏಳು ಗಂಟೆಗೆ ಇಂಡಿಯಾ ಒಕ್ಕೂಟದ (INDIA Bloc) ಸಭೆ ಕರೆಯಲಾಗಿತ್ತು. ಸಭೆಗೂ ಮುನ್ನ ಇಂಡಿಯಾ ಒಕ್ಕೂಟಕ್ಕೆ ಆಪ್‌ ಶಾಕ್‌ ಕೊಟ್ಟಿದೆ.

Leave a Comment