Coastal Bulletin

ನವದೆಹಲಿ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಮೂರು ಸೇನಾ ಪಡೆಗಳ ಮುಖ್ಯಸ್ಥರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಕರ್ನಾಟಕದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮಧ್ಯಾಹ್ನದ ಬಳಿಕ ಮೈಸೂರಿನಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ. ದೆಹಲಿಯಲ್ಲಿ ಇಂದು ಸೇನಾಪಡೆ, ನೌಕಾಪಡೆ

ಹಾಗೂ ವಾಯುಪಡೆಯ ಮುಖ್ಯಸ್ಥರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

Leave a Comment