ಒಡಿಶಾ: ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ನಿಧನರಾಗಿದ್ದಾರೆ.
ಭುವನೇಶ್ವರ ಅಪೋಲೋ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಕೊನೆಯುಸಿರೆಳೆದಿದ್ದಾರೆ.
ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕದಲ್ಲಿ ಮಧ್ಯಾಹ್ನ ಗುಂಡಿನ ದಾಳಿ ನಡೆಸಲಾಗಿತ್ತು. ಆ ವೇಳೆ
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಮವಸ್ತ್ರದಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಎಂಬವರು ಗುಂಡಿನ ದಾಳಿ ನಡೆಸಿದ್ದಾರೆ,ದಾಳಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.














