ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ

Coastal Bulletin
ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ

ಬೆಂಗಳೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ (RCB) ಚೊಚ್ಚಲ ಐಪಿಎಲ್ (IPL) ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್​ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆದಿಯಾಗಿ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ. “ Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ” ಎಂದಿದ್ದಾರೆ.

ಮರೆಯಲಾಗದ, ಐತಿಹಾಸಿಕ ಗೆಲುವು: ಡಿಕೆ ಶಿವಕುಮಾರ್

ಈ ಸಲಾ ಕಪ್ ನಮ್ದೇ!❤️ ಐಪಿಎಲ್ನಲ್ಲಿ ಇಂದು ಮರೆಯಲಾಗದ, ಐತಿಹಾಸಿಕ ಗೆಲುವಿಗಾಗಿ ಆರ್ಸಿಬಿಗೆ ಅಭಿನಂದನೆಗಳು. 18 ವರ್ಷಗಳ ಉತ್ಸಾಹ, ನಿಷ್ಠೆ ಈ ರಾತ್ರಿ ಹೊರಹೊಮ್ಮಿದೆ. ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ. ಇದು ಗೆಲುವಿಗಿಂತ ಹೆಚ್ಚಿನದು. ಇಡೀ RCB ಸೈನ್ಯಕ್ಕೆ ಭಾವನಾತ್ಮಕ ಕ್ಷಣವಾಗಿದೆ.

ಈ ಗೆಲುವನ್ನು ಕರ್ನಾಟಕ ಹೆಮ್ಮೆಯಿಂದ ಹೇಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀ ಎಂದಿದ್ದಾರೆ.

ಈ ಸಲ ಕಪ್ ನಮ್ದು : ಕುಮಾರಸ್ವಾಮಿ

“ಐಪಿಎಲ್ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ” ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

“ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಅಭಿನಂದಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.

ಕನಸು ಕೊನೆಗೂ ನನಸಾಗಿದೆ: ಆರ್ ಅಶೋಕ್

18 ವರ್ಷಗಳ ಭರವಸೆ, ದುಃಖ ಮತ್ತು ಉತ್ಸಾಹ, ಕನಸು ಕೊನೆಗೂ ನನಸಾಗಿದೆ. ಆರ್ಸಿಬಿಗೆ ಅಭಿನಂದನೆಗಳು. ಕೊನೆಗೂ ಚಾಂಪಿಯನ್ಸ್ ಎಂದು ಆರ್ ಅಶೋಕ್ ಟ್ವೀಟ್ ಮಾಡಿದ್ದಾರೆ.

Leave a Comment