Coastal Bulletin

ಬೆಂಗಳೂರು: ಕನ್ನಡ ರಾಜ್ಯೋತ್ಸವ 2021 ರ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಜನಸೇವಕ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.  ಜನ ಸ್ಪಂದನ ವೆಬ್​ ಪೋರ್ಟಲ್​ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾಗಿದೆ.

ಆಧಾರ್ ಕಾರ್ಡ್, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನ ಸೇವಕ’ ಕಾರ್ಯಕ್ರಮ ಇದಾಗಿದ್ದು, ನಗರದ ಪ್ಯಾಲೇಸ್ ಗುಟ್ಟಹಳ್ಳಿಯ 4

ಮತ್ತು 5ನೇ ಅಡ್ಡರಸ್ತೆಗಳಲ್ಲಿರುವ ಆಯ್ದ 10 ಮನೆಗಳಿಗೆ ಸ್ಥಳೀಯ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಜತೆ ತೆರಳಿದ ಮುಖ್ಯಮಂತ್ರಿಯವರು ವಿವಿಧ ಸೇವೆಗಳನ್ನು ಸಂಬಂಧಪಟ್ಟವರ ಮನೆಯೊಳಗೇ ಹೋಗಿ ತಲುಪಿಸಿದರು.

Leave a Comment