ಬೆಂಗಳೂರು: ಕೊವೀಡ್ ಕಡಿಮೆ ಇರುವ ಸ್ಥಳದಲ್ಲಿ ಸದ್ಯಕ್ಕೆ ನಿರ್ಬಂಧಗಳನ್ನು ಸಡಿಲಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೋನಾ ದ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿರುವ ಕಾರಣ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಅನಿವಾರ್ಯ ಎಂದಿದ್ದಾರೆ.
ಸಂಕ್ರಾತಿ ವೇಳೆಗೆಯಾದರೂ ನಿಯಮ ಸಡಿಲಿಕೆ ಇದೆಯಾ ಎಂದು ಕೇಳಿದ ವರದಿಗಾರರ
ಪ್ರಶ್ನೆಗೆ ಉತ್ತರಿಸಿದ ಸಿಎಂ, ರಾಜ್ಯದಲ್ಲಿ ಪಾಸಿಟಿವ್ ಕೇಸ್ ಗಳು ಜಾಸ್ತಿ ಆಗುತ್ತಲೇ ಇದೆ.ಇಡೀ ದೇಶದಲ್ಲಿ ನಾವು ಮೂರನೇ ಸ್ಥಾನದಲ್ಲಿ ಇದ್ದೇವೆ .ಇಂತಹ ಪರಿಸ್ಥಿತಿಯಲ್ಲಿ ಜಾಗ್ರತೆ ವಹಿಸುವುದು ಮುಖ್ಯ ಎಂದರು.













