Coastal Bulletin

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್‌ 189 ಅಭ್ಯರ್ಥಿಗಳ ಟಿಕೆಟ್‌ ಬಿಡುಗಡೆ ಮಾಡಿದ್ದು, ಇಂದು( ಬುಧವಾರ) ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ 23 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.


ಎರಡನೇ ಪಟ್ಟಿಯಲ್ಲಿ 7 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಒಟ್ಟು 23 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಎರಡನೇ ಪಟ್ಟಿಯಲ್ಲೂ ಮೈಸೂರಿನ ಕೆಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್​​ಎ ರಾಮದಾಸ್

ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್​ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನವನ್ನೂ ಮಾಡಿದ್ದರು. ಎರಡನೇ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಹೆಸರು ಕಂಡುಬಂದಿಲ್ಲ. ಬುಧವಾರವಷ್ಟೇ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದರು.

Leave a Comment