ಉಡುಪಿ : ನಗರದ ಸಂತೆಕಟ್ಟೆಯ ಕೆ.ಜಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸೇರಿದ ಬೆಂಗಾವಲು ವಾಹನ ಪಲ್ಟಿಯಾಗಿದೆ.
ಬೆಂಗಾವಲು ವಾಹನ ಮುಂದಿದ್ದ ವಾಹನ ಸೂಚನೆ ನೀಡದೆ ದಾರಿ ಬದಲಾಯಿಸುವ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಾಹನವು
ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
















