ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಕೃಷಿಗೆ ಯಂತ್ರ ಬಳಕೆ ಪ್ರೋತ್ಸಾಹಿಸಲು ಇಂಧನ ವೆಚ್ಚ ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಡೀಸೆಲ್ ಸಹಾಯಧನ ನೀಡುವ ಸಂಬಂಧ ರೈತ ಶಕ್ತಿ ಎಂಬ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಕೃಷಿ ಯಂತ್ರೋಪಕರಣ ಬಳಕೆಗೆ ರೈತರನ್ನು ಪ್ರೋತ್ಸಾಹಿಸಲು ಮತ್ತು ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಡೀಸೆಲ್ ಸಹಾಯಧನ ನೀಡುವ ಸಂಬಂಧ ರೈತ
ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.
5 ಎಕರೆವರೆಗೆ ರೈತರಿಗೆ ಡಿಸೇಲ್ ಸಬ್ಸಿಡಿ ಪ್ರೋತ್ಸಾಹಧನ ನೀಡಲಾಗುವುದು. ಈ ಯೋಜನೆಗಾಗಿ 400 ಕೋಟಿ ರೂ.ಗಳನ್ನು ಬಜೆಟ್ ನಲ್ಲಿಡಲಾಗಿತ್ತು. ಹೆಚ್ಚುವರಿ ಅನುದಾನ ಅಗತ್ಯ ಕಾರಣಕ್ಕೆ 137 ಕೋಟಿ ರೂ. ನೀಡಲಾಗಿದೆ.














