Coastal Bulletin

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಾ.21 ರಂದು ಸಿಎಂ ಬಸವರಾಜ ಬೊಮ್ಮಾಯಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆಯಿಂದ 5,24,426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಇದಕ್ಕಾಗಿ 8,381 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 2,360 ಮನೆಗಳು ಮತ್ತು ರಾಜ್ಯದ ವಿವಿಧೆಡೆ 7746 ಮನೆಗಳನ್ನು

ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಯಲಹಂಕ, ಗೋವಿಂದರಾಜ ನಗರ, ಮುದ್ದಯ್ಯನಪಾಳ್ಯ, ಆನೇಕಲ್, ಕೆ.ಆರ್.ಪುರದಲ್ಲಿನ ಮನೆಗಳ ಹಸ್ತಾಂತರ ಮಾಡಿದರೆ, ಶಹಾಫುರ, ಚಿತ್ತಾಪುರ, ಹುಬ್ಬಳ್ಳಿ, ಉಡುಪಿ, ಶಿರಾ ಬಂಗಾರಪೇಟೆ, ಮಂಡ್ಯ ಸೇರಿದಂತೆ ಮೊದಲಾದ ಕಡೆಗಳಲ್ಲಿ ಮನೆಗಳು ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

Leave a Comment