ಉಡುಪಿ : ಉಡುಪಿ ಬಹ್ಮಗಿರಿಯ ಲಯನ್ಸ್ ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ನೂರಾರು ತುಳು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಹಯೋಗದಿಂದ ಅತೀ ವಿಜ್ರಂಭಣೆಯಲ್ಲಿ ಆಟಿಡೊಂಜಿ ದಿನ ಎಂಬ ಕಾರ್ಯಕ್ರಮವು ದಿನಾಂಕ 14-08-2022 ರಂದು ಯಶಸ್ವಿಯಾಗಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪ್ರತಿಕ್ಷಾ ರಿಧಮಿಕ್ ವಾಯಿಸ್ ಆಫ್ ಉಡುಪಿ ಹಾಗೂ ಉಡುಪಿ ಕರೊಕೆ ತಂಡದಿಂದ ತುಳು ಸಂಗೀತ ರಸಮಂಜರಿ ಆರಂಭಗೊಂಡು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉಧ್ಘಾಟನೆಯನ್ನು ಹಿರಿಯ ಅರ್ಚಕರಾದ ಶ್ರೀ ಕೇಶವ ಶಾಂತಿ ಯವರು ಉಧ್ಘಾಟಿಸಿದರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜಪ್ಪುರವರವರು ಅಧ್ಯಕ್ಷ ಭಾಷಣ ಮಾಡಿ ತುಳುನಾಡಿನ ಸಂಸ್ಕೃತಿ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪನೆ, ಉದ್ದೇಶ, ಸಾಮಾಜಿಕ ಹೋರಾಟ, ಸಾಮಾಜಿಕ ನೆರವು ಹಾಗೂ ಅಗತ್ಯತೆ ಬಗ್ಗೆ ಅಚ್ಚುಕಟ್ಟಾಗಿ ವಿವರಸಿದರು.
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶ್ರೀ ಶಂಕರ್ ಪೂಜಾರಿಯರು ಅತಿಥಿ ಭಾಷಣದಲ್ಲಿ ಆಟಿ ತಿಂಗಳ ವಿಶೇಷತೆಯ ಬಗ್ಗೆ ವಿವರಿಸಿದರು. ಸಾಮಾಜಿಕ ಕಾರ್ಯಕರ್ತರು ಬಡವರ ಬಂದು ಹಾಗೂ ಉದ್ಯಮಿಯಾದ ಶ್ರೀ ಕೃಷ್ಣಮೂರ್ತಿ ಆಚಾರ್ಯ ರವರು ಈ ಕಾರ್ಯಕ್ರಮ ಕಂಡು ಹಾಡಿ ಹೊಗಳಿ ತುಳುನಾಡ ಸಂಸ್ಕೃತಿ ಉಳಿಯಬೇಕಾದಲ್ಲಿ ಈ ಸಂಘಟನೆ ಅಗತ್ಯ ಹಾಗೂ ನಿಮ್ಮೊಂದಿಗೆ ಸದಾ ಇರುವ ಭರವಸೆ ನೀಡಿದರು.
ಮುಖ್ಯ ಅತಿಥಿಯಾದ ಉಡುಪಿ ನಗರ ಠಾಣಾ ಇನ್ಸ್ ಪೆಕ್ಟರ್ ಶ್ರೀ ಪ್ರಮೋದ್ ಕುಮಾರ್ ರವರು ಕಾನೂನಿನ ಬಗ್ಗೆ ಹಾಗೂ ತುಳುನಾಡಿನ ಬಗ್ಗೆ, ತುಳುನಾಡ ರಕ್ಷಣಾ ವೇದಿಕೆಯ ಅಗತ್ಯತೆಯ ಬಗ್ಗೆ ಸವಿವರದೊಂದಿಗೆ ವಿಸ್ತರಿಸಿ ಮುಂದಿನ ದಿನಗಳಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉತ್ತಮ ಕೆಲಸಗಳಿಗೆ ಸಹಕಾರ ನೀಡುವ ಬರವಸೆ ನೀಡಿದರು. ಜನತಾದಳ ಜಾತ್ಯಾತೀತ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷರಾದ ವಾಸುದೇವ್ ರಾವ್ ರವರು ಸ್ಥಾಪಕಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರ ಬಗ್ಗೆ ಹಾಡಿ ಹೊಗಳಿ ತುಳುನಾಡ ಸಂಸ್ಕೃತಿ ಬಗ್ಗೆ ಅಚ್ಚುಕಟ್ಟಾಗಿ ವಿವರಿಸಿದರು. ತುಳು ನಾಡಿನ ಅಭಿಮಾನದೊಂದಿಗೆ ನಮ್ಮ ಕರೆಗೆ ಓಗೊಟ್ಟು ಬಂದ ಹಿರಿಯ ವಕೀಲರಾದ ಶ್ರೀ ಹಮ್ಜತ್ ಹೆಜಮಾಡಿಯವರು ತುಳುನಾಡು ಮತ್ತು ತುಳು ಭಾಷೆಯ ಬಗ್ಗೆ ಸಂಪೂರ್ಣವಾಗಿ ವಿಸ್ತರಿಸಿ ರಾಷ್ಟ್ರಾದ್ಯಂತ ತುಳುನಾಡ ಸಂಸ್ಕೃತಿ ಬೆಳಗಲಿಯೆಂದು ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಮತ್ತು ದ.ಕ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ರವರು ತುಳುನಾಡು ಮತ್ತು ತುಳುವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಸಭಾ ಸದಸ್ಯರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ರಮೇಶ್ ಕಾಂಚನ್ ರವರು ಚಿಕ್ಕದಾಗಿ ಚೊಕ್ಕದಾಗಿ ತುಳುನಾಡ ಸಂಸ್ಕೃತಿ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ಧೀನ್ ಸುಬ್ರಹ್ಮಣ್ಯ ನಗರ, ಮುಖ್ಯ ಅತಿಥಿಗಳಾದ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಬ್(ರಿ ) ಇದರ ಸಂಸ್ಥಾಪಕರಾದ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಶೆಟ್ಟಿ,ಮಹಿಳಾ ಘಟಕ ಗೌರವ ಸಲಹಾಗಾರರಾದ ಶೋಭ ಪಾಂಗಳ, ಗೌರವ ಸಲಹಾಗಾರರಾದ ಸುಧಾಕರ್ ಅಮೀನ್, ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಕೃಷ್ಣ ಕುಮಾರ್, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಸುಕನ್ಯ ಪ್ರಭಾಕರ್, ಮಹಿಳಾ ಘಟಕ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಘಟಕ ಉಪಾಧ್ಯಕ್ಷರು ಹಾಗೂ ಕಾನೂನು ಸಲಹಾಗರರಾದ ನಾಗಲಕ್ಷ್ಮಿ, ಯುವ ಘಟಕ ಅಧ್ಯಕ್ಷರಾದ ಸುನಿಲ್ ಫೆರ್ನಾಂಡಿಸ್, ಐಟಿ ವಿಂಗ್ ಅಧ್ಯಕ್ಷರಾದ ರೋಷನ್ ಡಿಸೋಜ, ಕಾರ್ಮಿಕ ಘಟಕ ಅಧ್ಯಕ್ಷರಾದ ಜುನೈದ್, ಜಿಲ್ಲಾ ಉಪಾಧ್ಯಕ್ಷರಾದ ರಹೀಂ, ಜೊತೆ ಕಾರ್ಯದರ್ಶಿ ಶುಭಾಶ್ ಸುಧಾನ್, ಕಾರ್ನಿಕ ಘಟಕ ಪ್ರಧಾನ ಕಾರ್ಯದರ್ಶಿ ರಿತೇಶ್ ರಾವ್, ಖಜಾಂಚಿ ಡ್ಯಾನಿ, ಜಿಲ್ಲಾ ಕಾರ್ಯದರ್ಶಿ ಮಜೀದ್, ಮಹಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಶಾಂಭವಿ, ಮಹಿಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಸುಲತ, ಮಹಿಳಾ ಘಟಕ ಜೊತೆ ಕಾರ್ಯದರ್ಶಿ ಅನುಪಮ, ರೇಣುಕಾ, ಜಿಲ್ಲಾ ಕಾರ್ಯದರ್ಶಿಯಾದ ಸದಾನಂದ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರು ಸ್ವಾಗತ ಭಾಷಣ ಮಾಡಿದರು. ಸಂಘಟನಾ ಕಾರ್ಯದರ್ಶಿಯಾದ ಮೊಹಮ್ಮದ್ ಹಾರಿಸ್ ರವರು ನಿರೂಪಣೆ ಮಾಡಿದರು.