ಬೆಂಗಳೂರು : ಇದೇ ಮೊದಲ ಬಾರಿಗೆ ಆರಂಭಗೊಂಡ ಕನ್ನಡ ಬಿಗ್ ಬಾಸ್ ಒಟಿಟಿ ಅದ್ಧೂರಿಯಾಗಿ ತೆರೆಕಂಡಿದೆ. ಇಂದು ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಂಬರ್ ಅಂದರೆ ನಾನು ಎನ್ನುತ್ತಲೇ ಜನಪ್ರಿಯರಾದ ಗುರೂಜಿ ಆರ್ಯವರ್ಧನ್ 9ನೇ ಆವೃತ್ತಿ ಬಿಗ್ ಬಾಸ್ ಕನ್ನಡ ರಿಲಿಯಾಟಿ ಶೋಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ನೀಡಿದರು.
ಇನ್ನು ಕೋಸ್ಟಲ್ವುಡ್ ಸ್ಟಾರ್ ರೂಪೇಶ್ ಶೆಟ್ಟಿ ,ಸಾನ್ಯ ಅಯ್ಯರ್, ರಾಕೇಶ್ ಅಡಿಗ ಕೂಡ 9ನೇ ಆವೃತ್ತಿ ಬಿಗ್ ಬಾಸ್ಗೆ ಅವಕಾಶ ಪಡೆದಿದ್ದಾರೆ. ಆ ಪೈಕಿ ರೂಪೇಶ್ ಶೆಟ್ಟಿ ಅವರು ಟಾಪರ್ ಆಗಿದ್ದಾರೆ. ಅವರಿಗೆ ಫಿನಾಲೆ ವೇದಿಕೆಯಲ್ಲಿ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು. ಕೊನೇ ವಾರದಲ್ಲಿ ವಿಶೇಷ ಟಾಸ್ಕ್ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್ ಪರ್ಫಾರ್ಮೆನ್ಸ್ ನೀಡುವ ಮೂಲಕ ರೂಪೇಶ್ ಶೆಟ್ಟಿ ಅವರು ಈ ಬಹುಮಾನದ ಮೊತ್ತ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.
ಈ ಮೂಲಕ ಒಟಿಟಿಯಿಂದ ನಾಲ್ವರು ಸ್ಪರ್ಧಿಗಳು 9ನೇ ಆವೃತ್ತಿ ಬಾಗ್ ಬಾಸ್ಗೆ ಎಂಟ್ರಿಕೊಟ್ಟಿದ್ದಾರೆ. ಸೆಪ್ಟೆಂಬರ್ 24 ರಿಂದ 9ನೇ ಆವೃತ್ತಿ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆರಂಭಗೊಳ್ಳುತ್ತಿದೆ.
ಹಾಗೂ ಜಯಶ್ರಿ ಆಯ್ಕೆಯಾಗಿದ್ದರು. 8 ಸ್ಪರ್ಧಿಗಳ ಪೈಕಿ ನಾಲ್ವರು 9ನೇ ಆವೃತ್ತಿಗೆ ಬಡ್ತಿ ಪಡೆದಿದ್ದಾರೆ.















