ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ,ಮೂವರನ್ನು ಬಂಧಿಸಿದ ಪೊಲೀಸರು.

Coastal Bulletin
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ,ಮೂವರನ್ನು ಬಂಧಿಸಿದ ಪೊಲೀಸರು.

ಶ್ರೀರಾಮ ನವಮಿ ಪ್ರಯುಕ್ತ ರಸ್ತೆಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು ಗಲಾಟೆ ಮಾಡಿದ್ದು, ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕಾರಿನಲ್ಲಿ ಹೋಗುವಾಗ ಜೈಶ್ರೀರಾಮ್ ಘೋಷಣೆ ಕೂಗುತ್ತಿದ್ದವರನ್ನು ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ಅಡ್ಡಗಟ್ಟಿದ ಮುಸ್ಲಿಂ ಯುವಕರು ಜೈಶ್ರೀರಾಮ್ ಹೇಳಬಾರದು, ಅಲ್ಲಾ ಹು ಅಕ್ಬರ್ ಹೇಳಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಮ್ಮ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಾರಿನಲ್ಲಿ ಬಾವುಟ ಹಿಡಿದು ಜೈಶ್ರೀರಾಮ್ ಎಂದು ಹೋಗುವಾಗ ಕಾರು ಅಡ್ಡಗಟ್ಟಿರುವ ಪುಂಡರು, ಅಲ್ಲಾ ಹು ಅಕ್ಬರ್ ಅನ್ನುವಂತೆ ಗಲಾಟೆ ಮಾಡಿದ್ದಾರೆ. ಬಳಿಕ ಮತ್ತಷ್ಟು ಜನರನ್ನು ಕರೆದುಕೊಂಡು ಬಂದು ಕಾರಿನಲ್ಲಿದ್ದ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. . ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Comment