ಮೈಸೂರು: ಹ್ಯಾಟ್ರೀಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದಂತ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ಈ
ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಂತ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ನಂತರ ಅವರು ಮೈಸೂರಿನ ಬಿಜೆಪಿಎಸ್ ಆಸ್ಪತ್ರೆಗೆ ತೆರಳಿ, ಪರೀಕ್ಷಿಸಿ, ಚಿಕಿತ್ಸೆ ಪಡೆದು ಮರಳಿದ್ದಾರೆ ಎನ್ನಲಾಗುತ್ತಿದೆ.















