ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು ವಿಪಕ್ಷದ ಸದಸ್ಯರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪೂರಕ ಅಜೆಂಡಾ ಮಂಡಿಸಿದರು.
ವಿಧೇಯಕ ಮಂಡನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ಸದಸ್ಯರು, ತರಾತುರಿಯಲ್ಲಿ ವಿಧೇಯಕ ಮಂಡನೆ ಮಾಡಲಾಗಿದೆ.ವಿಧೇಯಕ ಪ್ರತಿ ನೀಡಿಲ್ಲ,ಬಿಎಸಿಯಲ್ಲಿ ಚರ್ಚೆಯಾಗಿಲ್ಲವೆಂದು
ಆರೋಪಿಸಿದರು. ಹಾಗೆಯೇ ಕದ್ದುಮುಚ್ಚಿ ಯಾಕೆ ಮಂಡನೆ ಮಾಡುತ್ತಿದ್ದೀರಿ ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದರು.














