ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ. ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.
ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್ಎಸ್ಎಸ್ ಎಂದು ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡಾಗ ನಿಷೇಧ ಹೇರಲಾಗುವುದು. ಭಜರಂಗದಳ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂಬುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದು ಖರ್ಗೆ ತಿಳಿಸಿದ್ದಾರೆ.