ಬೆಂಗಳೂರು : ಸ್ತ್ರೀಯರು ಸ್ವಯಂ ಉದ್ಯೋಗ ಕೈಗೊಂಡು ಪುರುಷರಿಗೆ ಸರಿಸಮಾನಾಗಿ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಿ ಪ್ರಸಕ್ತ ವರ್ಷದಿಂದಲೇ ಸ್ತ್ರೀ ಸಾಮಥ್ರ್ಯ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಯೋಜನೆಯನ್ನು ಈ
ವರ್ಷವೇ ಜಾರಿ ಮಾಡುತ್ತೇವೆ. ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದರಿಂದ ಮಹಿಳೆಯರ ಸಬಲೀಕರಣವಾಗಲಿದೆ ಎಂದು ಸಿಎಂ ಅಭಿಪ್ರಾಯಪಟ್ಟರು.















