ಮೈಸೂರು : ನಂಜನಗೂಡು ಮಂದಿರ ಕೆಡವಿ ಕೆಲವೇ ದಿನಗಳಲ್ಲಿ ತಹಶಿಲ್ದಾರ್ ತಲೆದಂಡವಾಗಿದೆ. ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಈ ಪ್ರಕರಣ ಹಿಂದೂ ಸಮಾಜವನ್ನು ಕೆರಳಿಸುವಂತೆ ಮಾಡಿತ್ತು. ಇಂತಹ ಘಟನೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.
ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ಇವರ ತಲೆದಂಡವಾಗಿದೆ.
ಇವರನ್ನು ಬೆಂಗಳೂರು ಸಕ್ಷಮ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದೆ.















