ಬೆಂಗಳೂರು: KSRTC ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ (BPL) ಕಾರ್ಡ್ ಬೇಕು ಎಂದು ಹೇಳುವುದೇ ಇಲ್ಲ ಎಂದಿದ್ದಾರೆ. ಹೀಗಾಗಿ ಎಲ್ಲಾ ಮಹಿಳೆಯರಿಗೂ ಬಸ್ನಲ್ಲಿ ಉಚಿತ (Free bus) ಪ್ರಯಾಣವಿದ್ದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಎಂದಿದ್ದಾರೆ. ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.
ಮಹಿಳೆಯರಿಗೆ ಉಚಿತ ಬಸ್ ಸೇವೆ ವಿಚಾರವಾಗಿ, ಪ್ರತಿ ವರ್ಷ ಅಂದಾಜು 3200 ಕೋಟಿ ಹಣ ಬೇಕಾಗುತ್ತದೆ. ನಾಲ್ಕು ನಿಗಮ ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದ್ರೆ ಯೋಜನೆ ಜಾರಿಗೆ ಅನುಕೂಲವಾಗುತ್ತೆ. ಸರ್ಕಾರ ಹಣ ನೀಡದಿದ್ರೆ ನಿಗಮಗಳು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರ್ಥಿಕ ಪರಿಸ್ಥಿತಿ, ಕೋವಿಡ್ ವೇಳೆ ಆಗಿರುವ ನಷ್ಟ.ಕೋವಿಡ್ ವೇಳೆ ನೌಕರರ ನೇಮಕ್ಕೆ ತಡೆಯಾಗಿತ್ತು. ಹೊಸ ಬಸ್ ಗಳ ಸಂಚಾರಕ್ಕೆ ಎಲ್ಲೆಲ್ಲ ತೊಂದರೆ ಇದೆ. ಎಲ್ಲ ಮಾಹಿತಿಯನ್ನ ತೆಗೆದುಕೊಳ್ಳಲಾಗಿದೆ. ಹೊಸ ಬಸ್ ಗಳನ್ನ ಎಲ್ಲ ನಿಗಮಗಳಿಗೆ ಸೇರ್ಪಡೆ ಮಾಡುತ್ತೇವೆ. ಪ್ರಯಾಣಿಕ 82 ಲಕ್ಷದ 51 ಸಾವಿರ ಜನ ಪ್ರಯಾಣಿಸುತ್ತಾರೆ. ತಿಂಗಳಿಗೆ 24. ಕೋಟಿ ಜನ ಓಡಾಟ ನಡೆಸುತ್ತಾರೆ ಎಂದು ರೆಡ್ಡಿ ಹೇಳಿದ್ದಾರೆ.
ಮಹಿಳೆಯರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಹಿನ್ನೆಲೆ ಇಂದು ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಾಲ್ಕೂ ನಿಗಮಗಳ ಎಂಡಿಗಳ ಜೊತೆ ಮಾತುಕತೆ ನಡೆಸಿದರು. ಸಭೆಯಲ್ಲಿ BMTC, KSRTC, NWKRTC, KKRTC ಎಂಡಿಗಳು ಭಾಗಿಯಾಗಿದ್ದರು. ನಿಗಮಗಳಲ್ಲಿ ಪ್ರತಿನಿತ್ಯ ಸಂಚರಿಸುತ್ತಿರೋ ಮಹಿಳೆಯರ ಸಂಖ್ಯೆ. ಅವರು ಕ್ರಮಿಸುತ್ತಿರೋ ಸರಾಸರಿ ಕಿಲೋಮೀಟರ್ಗಳ ಪ್ರಮಾಣ. ನಿಗಮಗಳು ಪ್ರತಿನಿತ್ಯ ದುಡಿಯುತ್ತಿರೋ ಒಟ್ಟು ಮೊತ್ತವೆಷ್ಟು? ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆದಿದೆ.