Coastal Bulletin

ಚಿತ್ರದುರ್ಗ: ಇಂದು ಡಾ. ಪುನೀತ್ ರಾಜ್​ಕುಮಾರ್ ಅವರಿಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಡಾ.ಶಿವಮೂರ್ತಿ ಮುರುಘಾ ಶರಣರಿಂದ ಮರಣೋತ್ತರ ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಮುರುಘಾ ಶ್ರೀಗಳ ಕೋರಿಕೆಯಂತೆ ಪ್ರಶಸ್ತಿ ಸ್ವೀಕರಿಸಿದ ನಂತರ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಜೊತೆ ಆಗಮಿಸಿರುವ

ರಾಘವೇಂದ್ರ ರಾಜ್​ಕುಮಾರ್ ಅವರ ಪತ್ನಿ ಮಂಗಳ, ಮಾವ ಚಿನ್ನೇಗೌಡ ಮುರುಘಾಮಠಕ್ಕೆ ಆಗಮಿಸಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಸಹ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Leave a Comment