Coastal Bulletin

ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.

ತೌಫೀಲ್​ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಎನ್ಐಎ ಅಧಿಕಾರಿಗಳು ನಿನ್ನೆ ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.

20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20

ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment