ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಕಾಂಗ್ರೆಸ್ ಟೀಕೆಗಳನ್ನು ಆರಂಭಿಸಿದೆ.ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಬೆನ್ನಲ್ಲೇ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್, ಇದು ‘ಪದತ್ಯಾಗ’ ಅಲ್ಲ, ‘ಪದಚ್ಯುತಿ’ ಎನ್ನುವುದನ್ನು ಕಣ್ಣೀರು ಹೇಳುತ್ತಿದ್ದವು ಎಂದಿದೆ.















