ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಮುಂದಿನ 24 ಗಂಟೆಗಳ ವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಣೆಯನ್ನು ಮಾಡಿದೆ.
ಹಿಮಾಚಲ ಪ್ರದೇಶದಲ್ಲಿ ಕಂಡ ಕಂಡಲ್ಲಿ ಭೂಕುಸಿತವಾಗಿರುವ ಹಿನ್ನಲೆ ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಇಲ್ಲಿಯವರೆಗೆ 13 ಕಡೆ ಭಾರೀ ಭೂಕುಸಿತ ಉಂಟಾಗಿದೆ. ೨೨ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕುಲು-ಮನಾಲಿ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಪ್ಯಾಕೇಜ್ ಟೂರ್ನಲ್ಲಿ ಹೋಗಿದ್ದ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾದವರು. ನಾಲ್ವರು ಕಳೆದ ಗುರುವಾರ ಮೈಸೂರಿನಿಂದ ಕುಲು-ಮನಾಲಿಗೆ
ತೆರಳಿದ್ದರು. ಭಾನುವಾರ ರಾತ್ರಿ ಕೊನೆಯದಾಗಿ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿದೆ.
ಇನ್ನು ಉನಾ, ಹಮಿರ್ಪುರ್, ಕಾಂಗ್ರ, ಚಂಬ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಡಿ, ಕಿನ್ನೌರ, ಲಹೌರ್ ಜಿಲ್ಲೆಗಳಲ್ಲಿ ಪ್ರವಾಹ ವಿಕೋಪದ ಮುನ್ನೆಚ್ಚರಿಕೆ ಘೋಷಿಸಿಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 50 ವರ್ಷಗಳಲ್ಲಿ ಇಷ್ಟೊಂದು ಮಳೆ ಸುರಿದಿರಲಿಲ್ಲ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಂದೀಪ್ ಕುಮಾರ್ ಶರ್ಮ ತಿಳಿಸಿದ್ದಾರೆ.















