ಬಂಟ್ವಾಳ: ಕೈನೋವು ಎಂದು ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ತೆರಳಿದ ಹೋಟೆಲ್ ಮಾಲೀಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದ ಯುವಕ ಎಂದು ತಿಳಿದು ಬಂದಿದೆ.
ಸಂದೀಪ್ ಜೈನ್ ಅವರು ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್
ಬೆಟ್ಟು ಎಂಬಲ್ಲಿ ವಾಸವಾಗಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ಎಂಬ ಹೋಟೆಲ್ ನಡೆಸಿಕೊಂಡಿದ್ದರು.
ಪುಂಜಾಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















