ಅಳಿಕೆ ಗ್ರಾಮದ ಮುಳಿಯದಲ್ಲಿ ಕುದ್ದುಪದವು ಪೆರುವಾಯಿ ರಸ್ತೆಯಲ್ಲಿ ಪರವಾನಿಗೆ ಇಲ್ಲದೆ ಕೇರಳ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ವಿಟ್ಲ ಪೊಲೀಸರಯ ಬುಧವಾರ ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ ಯಾನೆ ಮೋನು, ಮೂಸಾ, ಹಮೀದ್ ಆರೋಪಿಗಳಾಗಿದ್ದಾರೆ.
ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು
ಬೈಕ್ನಲ್ಲಿ ಬಂದ ಐವರು ಅಡ್ಡಗಟ್ಟಿ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ ಬಗ್ಗೆಯೂ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















