ವೃಕ್ಷಮಾತೆ ಎಂದು ಕರೆಯಲ್ಪಡುವ ಸಾಲುಮರದ ತಿಮ್ಮಕ್ಕ ಬಿದ್ದು ಗಾಯಗೊಂಡಯ ಅಸ್ವಸ್ಥರಾಗಿದ್ದು, ಅವರನ್ನು ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.
ಕಾಲು ಜಾರಿ ಬಿದ್ದ ಪರಿಣಾಮ ಬೆನ್ನಿನ ಮೂಳೆಗೆ ಪೆಟ್ಟುಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದೀಗ ಪದ್ಮಶ್ರೀ
ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.















