ಬೆಂಗಳೂರು: ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಂತ ಹೇಳಿಕೆ ಸಂಬಂಧ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಇಂತಹ ಕೇಸ್ ರದ್ದು ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಹೈಕೋರ್ಟ್ ಎಫ್ಐಆರ್ ಗೆ ತಡೆ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.
ನಟ ಉಪೇಂದ್ರ ವಿರುದ್ದ ಜಾತಿಯಿಂದಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು
ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇದಕ್ಕೂ ಮುಂಚೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ದೂರುದಾರರ ಸಮ್ಮುಖದಲ್ಲಿ ಉಪೇಂದ್ರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.
















